“ಅಲ್ಲಾಹನನ್ನು ಬಿಟ್ಟು ಬೇರೆ ಯಾರನ್ನೂ ಆರಾಧಿಸಬೇಡಿ, ಮಾತಾಪಿತರಿಗೆ, ಸಂಬಂಧಿಕರಿಗೆ, ಅನಾಥರಿಗೆ ಹಾಗೂ ಬಡವರಿಗೆ ಒಳಿತು ಮಾಡಿರಿ; ಜನರೊಡನೆ ಒಳ್ಳೆಯ ಮಾತನ್ನು ಆಡಿರಿ; ನಮಾಝ್ ಸಂಸ್ಥಾಪಿಸಿರಿ ಮತ್ತು ಝಕಾತ್ ನೀಡಿರಿ" ಎಂದು (ಆದೇಶಿಸುತ್ತಾ) ನಾವು ಇಸ್ರಾಯೇಲ್ ಮಕ್ಕಳಿಂದ ಕರಾರು ಪಡೆದ ಸಂದರ್ಭ. ನಂತರ, ನಿಮ್ಮಲ್ಲಿ ಕೆಲವರ ಹೊರತು ಉಳಿದವರೆಲ್ಲವರೂ ನಿರ್ಲಕ್ಷಿಸುತ್ತಾ ವಿಮುಖರಾದಿರಿ.