ಅವರು (ಮರ್ದಿತರು) ಯಾರೆಂದರೆ, ಅಲ್ಲಾಹನೇ ನಮ್ಮ ಪರಿಪಾಲಕ ಎಂದು ಹೇಳಿದ ಕಾರಣಕ್ಕಾಗಿ ತಮ್ಮ ಮನೆಗಳಿಂದ ಅನ್ಯಾಯವಾಗಿ ಹೊರಹಾಕಲಾದವರು. ಅಲ್ಲಾಹು ಜನರಲ್ಲಿ ಕೆಲವರನ್ನು ಇತರ ಕೆಲವರ ಮೂಲಕ ತಡೆಯದಿರುತ್ತಿದ್ದರೆ, ಸನ್ಯಾಸಿ ಪೀಠಗಳು, ಚರ್ಚುಗಳು, ಯಹೂದಿಗಳ ಮಂದಿರಗಳು ಮತ್ತು ಅತ್ಯಧಿಕವಾಗಿ ಅಲ್ಲಾಹನ ಹೆಸರನ್ನು ಉಚ್ಛರಿಸಲಾಗುವ ಮಸೀದಿಗಳು ಧ್ವಂಸವಾಗುತ್ತಿದ್ದವು! ಅಲ್ಲಾಹನಿಗೆ ಸಹಾಯ ಮಾಡುವವರಿಗೆ ಅಲ್ಲಾಹು ಖಂಡಿತ ಸಹಾಯ ಮಾಡುತ್ತಾನೆ. ನಿಶ್ಚಯವಾಗಿಯೂ ಅಲ್ಲಾಹು ಬಲಿಷ್ಠನು ಮತ್ತು ಅಜೇಯನಾಗಿದ್ದಾನೆ.