ವಿವಿಧ ಊರುಗಳ ಜನರ ಆಸ್ತಿಗಳಿಂದ ಅಲ್ಲಾಹು ತನ್ನ ಸಂದೇಶವಾಹಕರಿಗೆ ಏನನ್ನು ವಶಪಡಿಸಿಕೊಟ್ಟನೋ, ಅದು ಅಲ್ಲಾಹನಿಗೆ, ಸಂದೇಶವಾಹಕರಿಗೆ, ಹತ್ತಿರದ ಸಂಬಂಧಿಕರಿಗೆ, ಅನಾಥರಿಗೆ, ಕಡುಬಡವರಿಗೆ ಮತ್ತು ಪ್ರಯಾಣಿಕರಿಗೆ ಇರುವುದಾಗಿದೆ. ಇದೇಕೆಂದರೆ, ಧನವು ನಿಮ್ಮಲ್ಲಿನ ಶ್ರೀಮಂತರ ನಡುವೆ ಮಾತ್ರ ಚಲಾವಣೆಯಾಗದಿರುವುದಕ್ಕಾಗಿ. ಸಂದೇಶವಾಹಕರು ನಿಮಗೆ ಏನು ಕೊಡುತ್ತಾರೋ ಅದನ್ನು ಸ್ವೀಕರಿಸಿರಿ ಮತ್ತು ಅವರು ನಿಮಗೆ ಏನು ವಿರೋಧಿಸುತ್ತಾರೋ ಅದರಿಂದ ದೂರವಿರಿ. ಅಲ್ಲಾಹನನ್ನು ಭಯಪಡಿರಿ. ನಿಶ್ತಯವಾಗಿಯೂ ಅಲ್ಲಾಹು ಅತಿಕಠೋರವಾಗಿ ಶಿಕ್ಷಿಸುವವನಾಗಿದ್ದಾನೆ.