ನಾವು ಅವರಿಗೆ ಅದರಲ್ಲಿ (ತೌರಾತ್ನಲ್ಲಿ) ಜೀವಕ್ಕೆ ಜೀವ, ಕಣ್ಣಿಗೆ ಕಣ್ಣು, ಮೂಗಿಗೆ ಮೂಗು, ಕಿವಿಗೆ ಕಿವಿ, ಹಲ್ಲಿಗೆ ಹಲ್ಲು ಮತ್ತು ಗಾಯಗಳಿಗೆ ಪ್ರತೀಕಾರ ಪಡೆಯಬೇಕೆಂದು ಆದೇಶಿಸಿದ್ದೇವೆ. ಯಾರಾದರೂ (ಪ್ರತೀಕಾರ ಪಡೆಯದೆ) ಕ್ಷಮಿಸಿದರೆ, ಅದು ಅವನಿಗೆ ಪರಿಹಾರವಾಗಿದೆ. ಅಲ್ಲಾಹು ಅವತೀರ್ಣಗೊಳಿಸಿದ್ದಕ್ಕೆ ಅನುಗುಣವಾಗಿ ಯಾರು ತೀರ್ಪು ನೀಡುವುದಿಲ್ಲವೋ ಅವರೇ ಅಕ್ರಮಿಗಳು.