ನೀವು ಅವರಿಗೆ (ಪ್ರವಾದಿಗೆ) ಸಹಾಯ ಮಾಡುವುದಿಲ್ಲವೆಂದಾದರೆ, ಅಲ್ಲಾಹು ಅವರಿಗೆ ಖಂಡಿತ ಸಹಾಯ ಮಾಡಿದ್ದಾನೆ. ಅವರು ಇಬ್ಬರಲ್ಲಿ ಒಬ್ಬರಾಗಿದ್ದು, ಸತ್ಯನಿಷೇಧಿಗಳು ಅವರನ್ನು (ಮಕ್ಕಾದಿಂದ) ಹೊರದಬ್ಬಿ, ಅವರಿಬ್ಬರು1 ಗುಹೆಯಲ್ಲಿ ಆಶ್ರಯ ಪಡೆದಾಗ ಮತ್ತು ಅವರು ತಮ್ಮ ಸಹಚರನೊಡನೆ, “ಸಂಕಟಪಡಬೇಡ, ನಿಶ್ಚಯವಾಗಿಯೂ ಅಲ್ಲಾಹು ನಮ್ಮ ಜೊತೆಗಿದ್ದಾನೆ” ಎಂದು ಹೇಳಿದ ಸಂದರ್ಭ. ಆಗ ಅಲ್ಲಾಹು ಅವರ ಮೇಲೆ ತನ್ನ ಕಡೆಯ ಶಾಂತಿಯನ್ನು ಇಳಿಸಿದನು, ನೀವು ನೋಡದೇ ಇರುವಂತಹ ಸೈನ್ಯಗಳ ಮೂಲಕ ಅವರಿಗೆ ಶಕ್ತಿಯನ್ನು ನೀಡಿದನು ಮತ್ತು ಸತ್ಯನಿಷೇಧಿಗಳ ವಚನವನ್ನು ಕೆಳಮಟ್ಟಕ್ಕಿಳಿಸಿದನು. ಅಲ್ಲಾಹನ ವಚನವು ಅತ್ಯುನ್ನತವಾಗಿದೆ. ಅಲ್ಲಾಹು ಪ್ರಬಲನು ಮತ್ತು ವಿವೇಕಪೂರ್ಣನಾಗಿದ್ದಾನೆ.